DECEMBER 9, 2022
  • Grace Plaza, 2nd Floor, Bailoor,Udupi – 576101
National News

ಬೆಂಗಳೂರು: ದಾಖಲೆಯ 17ನೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯದ ಆಯವ್ಯಯದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಬೆಂಗಳೂರು: ದಾಖಲೆಯ 17ನೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯದ ಆಯವ್ಯಯದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಬೆಂಗಳೂರು: ದಾಖಲೆಯ 17ನೇ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು (ಶುಕ್ರವಾರ) ಮಂಡಿಸಿದ ರಾಜ್ಯದ ಆಯವ್ಯಯದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

  1. ಹೆಚ್ಚಿನ ಬೇಡಿಕೆ ಇರುವ ಜಿಲ್ಲೆಗಳಲ್ಲಿ 150 ಸಂಖ್ಯಾಬಲದ 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು. ಹಾಲಿ ಕಾರ್ಯನಿರ್ವಹಿಸುತ್ತಿರುವ 25 ವಿದ್ಯಾರ್ಥಿನಿಲಯಗಳಲ್ಲಿ 50 ವಿದ್ಯಾರ್ಥಿಗಳ ಸಂಖ್ಯಾಬಲವನ್ನು ಹೆಚ್ಚಿಸಲಾಗುವುದು.
  2. ಅಲ್ಪಸಂಖ್ಯಾತರ ವಸತಿ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ 10 ಹೊಸ ವಸತಿ ಶಾಲೆಗಳನ್ನು CBSE ಪಠ್ಯಕ್ರಮದಡಿಯಲ್ಲಿ ಪ್ರಾರಂಭಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ₹10 ಕೋಟಿ ಅನುದಾನ.
  3. 2026-27ನೇ ಸಾಲಿನಲ್ಲಿ 25 ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ ವಸತಿ ಶಾಲೆಗಳನ್ನು ಹೊಸದಾಗಿ ಪ್ರಾರಂಭಿಸಲಾಗುವುದು.
  4. 2025-26ನೇ ಸಾಲಿನಲ್ಲಿ 117 ಮೌಲಾನಾ ಆಜಾದ್ ಮಾದರಿ ಶಾಲೆಗಳು ಹಾಗೂ ಉರ್ದು ಶಾಲೆಗಳನ್ನು ಕೆ.ಪಿ.ಎಸ್‌. ಮಾದರಿಯಲ್ಲಿ ₹600 ಕೋಟಿ ವೆಚ್ಚದಲ್ಲಿ ಉನ್ನತೀಕರಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಇನ್ನೂ 100 ಶಾಲೆಗಳನ್ನು ₹400 ಕೋಟಿ ವೆಚ್ಚದಲ್ಲಿ ಇದೇ ಮಾದರಿಯಲ್ಲಿ ಉನ್ನತೀಕರಿಸಲಾಗುವುದು.
  5. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪೈಕಿ 25 ವಸತಿ ಶಾಲೆಗಳಲ್ಲಿ ಪಿ.ಯು.ಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳನ್ನು ಪ್ರಾರಂಭಿಸಲಾಗುವುದು. 18 ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗವನ್ನು ಪ್ರಾರಂಭಿಸಲಾಗುವುದು.
  6. ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ಪಿ.ಯು.ಸಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಿ, ಅವರಿಗೆ K-CET/JEE/NEET ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡಲು ನಾಲ್ಕು ವಸತಿ ಶಾಲೆಗಳನ್ನು Center of Excellenceಗಳನ್ನಾಗಿ ಸ್ಥಾಪಿಸಲಾಗುವುದು. ಅಲ್ಲದೇ 20 ವಸತಿ ಶಾಲೆಗಳಲ್ಲಿನ ಮಕ್ಕಳಿಗೆ CET/JEE/NEET ವಿಶೇಷ ತರಬೇತಿ ನೀಡಲಾಗುವುದು.
  7. ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ನಿರಂತರ ಕಲಿಕಾ ಅವಕಾಶಗಳನ್ನು ಒದಗಿಸಲು ಮತ್ತು ಜ್ಞಾನವನ್ನು ವೃದ್ಧಿಸಲು ಆಯ್ದ ವಕ್ಸ್ ಆಸ್ತಿಗಳಲ್ಲಿ ಕಲಿಕಾ ಕೇಂದ್ರ ಹಾಗೂ ನಾಗರಿಕ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು.
  8. ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಬೆಂಗಳೂರಿನಲ್ಲಿ 100 ಸಂಖ್ಯಾಬಲದ ಉದ್ಯೋಗಸ್ಥ ಮಹಿಳೆಯರ ನಾಲ್ಕು ವಸತಿನಿಲಯಗಳನ್ನು ಪ್ರಾರಂಭಿಸಲಾಗುವುದು.
  9. ಜೈನ, ಬೌದ್ಧ ಮತ್ತು ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ₹100 ಕೋಟಿ ಅನುದಾನವನ್ನು ಮೀಸಲಿರಿಸಲಾಗಿದೆ.
  10. ಬೌದ್ಧ ಧರ್ಮದ ಧಮ್ಮಾಚಾರಿಗಳಿಗೆ ₹6,000 ಮಾಸಿಕ ಗೌರವಧನವನ್ನು ನೀಡಲಾಗುವುದು.
  11. ಅಲ್ಪಸಂಖ್ಯಾತ ಸಮುದಾಯದ ನಿರ್ಗತಿಕ ಜನರಿಗೆ 100 ಸಂಖ್ಯಾಬಲದ ಎರಡು ಮಹಿಳಾ ವೃದ್ಧಾಶ್ರಮಗಳನ್ನು ಪ್ರಾರಂಭಿಸುವುದಕ್ಕೆ ನೆರವು ನೀಡಲಾಗುವುದು.
  12. ಅಲ್ಪಸಂಖ್ಯಾತರ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ತಾಂತ್ರಿಕ ಹಾಗೂ ಉನ್ನತ ಮಟ್ಟದ ಡಿಜಿಟಲ್ ಶಿಕ್ಷಣವನ್ನು ಪ್ರೋತ್ಸಾಹಿಸಲು 5,000 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಗಾಗಿ ತಲಾ ₹50,000ಗಳನ್ನು ನೀಡಲಾಗುವುದು.
  13. ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿ ಯುವಕ/ಯುವತಿಯರಿಗೆ ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ (Kiosk) ಸೌಲಭ್ಯಗಳನ್ನು ನಿಗಮಗಳ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಘಟಕ ವೆಚ್ಚದ ಶೇ 75ರಷ್ಟು ಅಥವಾ ಗರಿಷ್ಠ ₹3ಲಕ್ಷ ಸಹಾಯಧನ ನೀಡಲಾಗುವುದು.
  14. ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಪ್ರೋತ್ಸಾಹ ನೀಡಲು ಅಲ್ಪಸಂಖ್ಯಾತರ ಮಹಿಳಾ ಕೋ-ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸಲಾಗುವುದು.
  15. ಹಿರಿಯ ನಾಗರೀಕರಿಗೆ ಆರೋಗ್ಯ ಮತ್ತು ಆರೈಕೆ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರೈಸ್ತ ಸಂಸ್ಥೆಗಳು ನಡೆಸುವ 10 ವೃದ್ಧಾಶ್ರಮಗಳಲ್ಲಿ ಸಮಗ್ರ ಜೆರಿಯಾಟ್ರಿಕ್ ಪ್ಯಾಲಿಯೇಟಿವ್ ಕೇರ್ ಘಟಕಗಳನ್ನು ಸ್ಥಾಪಿಸಲು ತಲಾ ₹50 ಲಕ್ಷದಂತೆ ಒಟ್ಟಾರೆ ₹4 ಕೋಟಿ ಒದಗಿಸಲಾಗುವುದು.
  16. ಬೆಂಗಳೂರಿನ ಕೆಂಗೇರಿಯಲ್ಲಿ ಆಸಿರ್ವನಂ ಬೆನಿಡಿಕ್ಟಿನ್ ಮೊನಾಸ್ಟರಿಯ ಎರಡು ಎಕರೆ ಜಾಗದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಸ್ಥಾಪಿಸಲು ಮುಖ್ಯ ಸಂಸ್ಥಾತ್ಮಕ ಮೂಲಸೌಕರ್ಯದ ನಿರ್ಮಾಣಕ್ಕೆ ₹5ಕೋಟಿಗಳನ್ನು ಒದಗಿಸಲಾಗುವುದು.
  17. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕ‌ರ್ ಹಾಗೂ ಇತರೆ ಸಮಾಜ ಸುಧಾರಕರ ಪುಸ್ತಕಗಳನ್ನು ಉರ್ದು ಭಾಷೆಯಲ್ಲಿ ಅನುವಾದಿಸಲಾಗುವುದು.
  18. ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನಗಳನ್ನು ನಿರ್ಮಾಣ ಮಾಡಲಾಗುವುದು.
  19. ವಕ್ಸ್ ಸಂಸ್ಥೆಗಳಲ್ಲಿನ 31 ಮಹಿಳಾ ಪಿ.ಯು ಕಾಲೇಜುಗಳನ್ನು ಪದವಿ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ಮುಂದುವರೆದು, ಸವಣೂರಿನಲ್ಲಿ ಒಂದು ಹೊಸ ಮಹಿಳಾ ಪಿ.ಯು. ಕಾಲೇಜನ್ನು ಪ್ರಾರಂಭಿಸಲಾಗುವುದು.
  20. ವಾಣಿಜ್ಯ ಉದ್ದೇಶಕ್ಕೆ ಅತಿ ಹೆಚ್ಚು ಬೇಡಿಕೆಯಿರುವ ಪ್ರದೇಶಗಳಲ್ಲಿ ವಕ್ಸ್ ಆಸ್ತಿಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.
  21. ಬೀದರ್‌ನ ನಾನಕ್ ಝೀರಾ ಸಾಹೇಬ್ ಗುರುದ್ವಾರದಲ್ಲಿ ಗ್ರಂಥಾಲಯವನ್ನು ಸ್ಥಾಪಿಸಲಾಗುವುದು.

Related News

About Us

Indian Christian Human Rights Federation

Indian Christian Human Rights Forum is a catalyst body standing by the Churches in India with the passion to cater legal, moral and other support.

This organization was Launched in 2008 and has brought legal and political pressure against the injustice on Christians and provided divers kind of assistance to God's Servants, People and the Needy and is always ready to continue to assist.

We are committed to provide all kind of legal assistance to the Churches in times of atrocities and persecution. Also, we provide moral and other relevant support to the needy churches or individuals as Christ Jesus has commanded.

Instagram